ಪ್ರತಿದಿನ ಎಳೆದಾಟ ಸಾಧ್ಯವಿಲ್ಲ, ಸರ್ಕಾರ ಬೇಕೋ ಬೇಡವೋ ಹೇಳಿ; ಕಾಂಗ್ರೆಸ್ಗೆ ದೇವೇಗೌಡ ಖಡಕ್ ಸಂದೇಶ
ದಿನಬೆಳಗಾದರೆ ಆಪರೇಷನ್ ಭೀತಿಯಲ್ಲೇ ಸರ್ಕಾರ ಸಾಗುತ್ತಿರುವುದನ್ನು ಕಂಡು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಕೆಂಡಾಮಂಡಲರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ
ವಿಧಾನಸಭೆ ಚುನಾವಣೆ ನಡೆದು ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಎರಡೂ ಪಕ್ಷಗಳ ನಡುವೆ ಭಿನ್ನಮತದ ಆಗಾಗ ಭುಗಿಲೇಳುತ್ತಲೇ ಇದೆ. ಅದರಲ್ಲೂ ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರ ಕರ್ನಾಟಕ ಸಮ್ಮಿಶ್ರ ಸರ್ಕಾರ ಉಳಿಯಲು ಸಾಧ್ಯವೇ ಇಲ್ಲ ಎಂಬಂತ ವಾತಾವರಣ ನಿರ್ಮಾಣವಾಗಿದೆ. ಒಂದೆಡೆ ಆಪರೇಷನ್ ಕಮಲದ ಭೀತಿಯಾದರೆ ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರು ಪದೇ ಪದೇ ಬಂಡಾಯದ ಕಹಳೆ ಮೊಳಗಿಸುತ್ತಲೇ ಇದ್ದಾರೆ.

Comments
Post a Comment